ಶನಿವಾರ, ಫೆಬ್ರವರಿ 25, 2012

ಮರೆತ ಅಭಿವೃದ್ಧಿ ಮಂತ್ರ



ಪ್ರಸಕ್ತ ಬಿಜೆಪಿ ಸರ್ಕಾರದ ಸ್ಥಿತಿ ಅವಲೋಕಿಸಿದರೆ ರಾಜ್ಯದ ನಾಯಕರು ಅಭಿವೃದ್ಧಿಯನ್ನು ಕಡೆಗಣಿಸಿರುವುದು ಸ್ಪಷ್ಟವಾಗುತ್ತದೆ. ನೆರೆ ರಾಜ್ಯಗಳು ಪೈಪೋಟಿಗಿಳಿದು ಅಭಿವೃದ್ಧಿಯ ಮಂತ್ರ ಜಪಿಸುತ್ತಿದರೆ ನಮ್ಮ ನಾಯಕರು ವೃಥಾ ಪರರ ಧೂಷಣೆಯಲ್ಲಿ ತೊಡಗಿದ್ದಾರೆ. ಸ್ವ-ಸ್ಥಾನಮಾನಕ್ಕಾಗಿ ಅವರವರಲ್ಲಿ ಕಿತ್ತಾಟ ನಡೀತಿದೆ. ಪ್ರಗತಿಪೂರಿತ ಯೋಜನೆಗಳು ಶೂನ್ಯವಾಗಿವೆ. ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆಯೆಂತಲೇ ಹೇಳಬೇಕು. ಸಚಿವರ ವಿಶಿಷ್ಟ ಹಗರಣಗಳಿಂದ ರಾಜ್ಯದ ವರ್ಚಸ್ಸು ಭೂಮಟ್ಟಕ್ಕೆ ಕುಸಿಯುತ್ತಿದೆ. ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸುವ ನಾವು ಒಂದೊಮ್ಮೆ ಯೋಚಿಸುವ ಕಾಲ ಬಂದಿದೆ. ಈ ನಡುವೆ ಸಾಮರಸ್ಯ ತರಲು ಹೈಕಮಾಂಡ್ ನಡೆಸುತ್ತಿರುವ ಕಸರತ್ತು ಕೂಡ ಪುಕ್ಕಟೆ ಮನರಂಜನೆಯೇ ಸರಿ. ರಾಜ್ಯದ ನಾಯಕರು ತಮ್ಮೆಲ್ಲ ಸ್ವ-ಪ್ರತಿಷ್ಠೆ ಬಿಟ್ಟು ಆರಿಸಿ ಕಳಿಸಿದ ಜನತೆಗೆ ಕಿಂಚಿತ್ತಾದರೂ ಕೆಲಸ ಮಾಡುವಂತಾಗಬೇಕು. ರಾಜ್ಯಕ್ಕೆ ಕೊಚ್ಚಾಟದ ನಾಯಕತ್ವ ಮುಖ್ಯ ಅಲ್ಲ, ಸಾಮೂಹಿಕ ಆಡಳಿತ ಮುಖ್ಯ. ಇನ್ನಾದರೂ ನಮ್ಮ ರಾಜಕಾರಣಿಗಳು ರಾಜ್ಯದ ಒಳಿತಿಗಾಗಿ ಶ್ರಮಿಸುವರೆ ಕಾದುನೋಡಬೇಕು.




-ರಾಜೇಂದ್ರ ಹುನಗುಂದ.
ಕೊಪ್ಪಳ


9738068449

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ